ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.

ಹೌದು, ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಆಯೋಜಿಸಿದ್ದ ಫಾರ್ಮ್ ಪಾರ್ಟಿ ಮಕ್ಕಳಿಗೆ ವಿನೂತನ ಅನುಭೂತಿ‌ ನೀಡಿತು.

ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನಗಳನ್ನು ಪ್ರದರ್ಶಿಸಿ, ಪರಿಚಯಿಸಲಾಯಿತು. ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಪೋಟೋಗೆ ಪೋಸ್ ನೀಡಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ‌್ಯಾಂಪ್‌ವಾಕ್ ಮುದ‌ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿನೂತನ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್  ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಮಕ್ಕಳೊಂದಿಗೆ ಮಾತನಾಡುವ ಮರ ( ಟಾಕಿಂಗ್ ಟ್ರೀ)  ಪ್ರಮುಖ ಆಕರ್ಷಣೆಯಾಗಿತ್ತು. ಮ್ಯಾಜಿಕ್ ಮ್ಯಾಟ್ ಮಕ್ಕಳಿಗೆ ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸಲು ನೆರವಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

13 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago