ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.

ಹೌದು, ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಆಯೋಜಿಸಿದ್ದ ಫಾರ್ಮ್ ಪಾರ್ಟಿ ಮಕ್ಕಳಿಗೆ ವಿನೂತನ ಅನುಭೂತಿ‌ ನೀಡಿತು.

ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನಗಳನ್ನು ಪ್ರದರ್ಶಿಸಿ, ಪರಿಚಯಿಸಲಾಯಿತು. ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಪೋಟೋಗೆ ಪೋಸ್ ನೀಡಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ‌್ಯಾಂಪ್‌ವಾಕ್ ಮುದ‌ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿನೂತನ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್  ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಮಕ್ಕಳೊಂದಿಗೆ ಮಾತನಾಡುವ ಮರ ( ಟಾಕಿಂಗ್ ಟ್ರೀ)  ಪ್ರಮುಖ ಆಕರ್ಷಣೆಯಾಗಿತ್ತು. ಮ್ಯಾಜಿಕ್ ಮ್ಯಾಟ್ ಮಕ್ಕಳಿಗೆ ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸಲು ನೆರವಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

3 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

4 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

23 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago