ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.
ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ್ಯಾಂಪ್ವಾಕ್ ಮುದ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.
ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯ ಪ್ರಾಂಶುಪಾಲರಾದ ರಶ್ಮಿ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…