ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.

ಹೌದು, ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಆಯೋಜಿಸಿದ್ದ ಫಾರ್ಮ್ ಪಾರ್ಟಿ ಮಕ್ಕಳಿಗೆ ವಿನೂತನ ಅನುಭೂತಿ‌ ನೀಡಿತು.

ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನಗಳನ್ನು ಪ್ರದರ್ಶಿಸಿ, ಪರಿಚಯಿಸಲಾಯಿತು. ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಪೋಟೋಗೆ ಪೋಸ್ ನೀಡಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ‌್ಯಾಂಪ್‌ವಾಕ್ ಮುದ‌ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿನೂತನ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್  ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.

ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಶಾಲೆಯಲ್ಲಿ ವಿಶೇಷವಾಗಿ ಮಕ್ಕಳೊಂದಿಗೆ ಮಾತನಾಡುವ ಮರ ( ಟಾಕಿಂಗ್ ಟ್ರೀ)  ಪ್ರಮುಖ ಆಕರ್ಷಣೆಯಾಗಿತ್ತು. ಮ್ಯಾಜಿಕ್ ಮ್ಯಾಟ್ ಮಕ್ಕಳಿಗೆ ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸಲು ನೆರವಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

8 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

11 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago