ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.
ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ್ಯಾಂಪ್ವಾಕ್ ಮುದ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.
ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯ ಪ್ರಾಂಶುಪಾಲರಾದ ರಶ್ಮಿ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…