ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ ಸೊಗಡನ್ನು ಪರಿಚಯಿಸುವ ವಿನೂತನ ಕಾರ್ಯಕ್ರಮಕ್ಕೆ ನ್ಯಾಷನಲ್ ಪ್ರೈಡ್ ಶಾಲೆ ಸಾಕ್ಷಿಯಾಯಿತು.
ಶಾಲೆಯ ಒಳಾವರಣದಲ್ಲಿ ಮಕ್ಕಳು ಹಾಗೂ ಪೋಷಕರಿಗಾಗಿ ವಿವಿಧ ಆಟಗಳು, ಮ್ಯಾಜಿಕ್ ಶೋ, ಟ್ಯಾಟೂ, ಪುಟಾಣಿ ಮಕ್ಕಳ ರ್ಯಾಂಪ್ವಾಕ್ ಮುದ ನೀಡಿತು. ಮಕ್ಕಳ ಜೊತೆ ಪೋಷಕರೂ ಕೂಡ ಮಕ್ಕಳಾಗಿ ಮನರಂಜನೆ ಅನುಭವಿಸಿದರು.
ಶಾಲೆಯಲ್ಲಿ ಎಲ್ಲ ಮಕ್ಕಳಿಗೆ ಹನುಮಾನ್ ಚಾಲಿಸಾ, ಭಗವದ್ಗೀತೆ, ಬೈಬಲ್ ಸ್ತೋತ್ರ ಹಾಗೂ ಧುವ ಹೇಳಿಕೊಡಲಾಗುತ್ತಿದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸುವ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರಪ್ರಥಮ ಬಾರಿಗೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ 3ಡಿ ಅನಿಮೇಶನ್ ಯಂತ್ರವನ್ನು ಕಲಿಕೆಗೆ ಅಳವಡಿಸಿ ಕಲಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಲೆಯ ಪ್ರಾಂಶುಪಾಲರಾದ ರಶ್ಮಿ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಪಾಲ್ಗೊಂಡಿತ್ತು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…