ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿಗೆ ಗಡುವು: ನೋಂದಣಿಗೆ ಜುಲೈ31ಕ್ಕೆ ಕೊನೆ ದಿನ

ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಅಧಿ ಸೂಚನೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಅಧಿಸೂಚಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಬೆಳೆ ವಿಮಾ ಯೋಜನೆ, ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ. ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ಬೆಳೆಗಳು

ನೆಲಮಂಗಲ: ಮಾವು,
ದೇವನಹಳ್ಳಿ: ದ್ರಾಕ್ಷಿ, ಮಾವು
ದೊಡ್ಡಬಳ್ಳಾಪುರ: ದ್ರಾಕ್ಷಿ, ಮಾವು
ಹೊಸಕೋಟೆ: ದ್ರಾಕ್ಷಿ, ಮಾವು

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂ ಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತ ಬಾಂಧವರು ಸದರಿ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು Fruits ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ಸದರಿ ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಸದರಿ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

ಬೆಳೆ ವಿಮಾ ಕಂತಿನ ವಿವರಗಳು

ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಮಾವು ಬೆಳೆಗೆ
ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 80,000. ರೈತರು ಪಾವತಿಸಬೇಕಾದ‌ ದರ ಶೇಕಡಾ (5%) ರೂಗಳಲ್ಲಿ 4,000.

ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ ವಿಮಾ ಮೊತ್ತ ₹ 2,80,000/, ರೈತರು ಪಾವತಿಸಬೇಕಾದ ದರ ಶೇಕಡಾ (5%) ರೂ. ಗಳಲ್ಲಿ ₹14,000.

ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ31ಕ್ಕೆ ಕಡೆ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೇವನಹಳ್ಳಿ
9448825101.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೊಡ್ಡಬಳ್ಳಾಪುರ
9880210892.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಹೊಸಕೋಟೆ
8217210320.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನೆಲಮಂಗಲ
9880461607.

ವಿಮಾ ಕಂಪನಿಯ ದೂರವಾಣಿ ಸಂಖ್ಯೆ — 9966222561 ಸಹಾಯವಾಣಿ ಸಂಖ್ಯೆ-18004250505 ಸಂಪರ್ಕಿಸಬಹುದು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago