ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿಗೆ ಗಡುವು: ನೋಂದಣಿಗೆ ಜುಲೈ31ಕ್ಕೆ ಕೊನೆ ದಿನ

ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಅಧಿ ಸೂಚನೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಅಧಿಸೂಚಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಬೆಳೆ ವಿಮಾ ಯೋಜನೆ, ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಡಾ. ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕುವಾರು ಬೆಳೆಗಳು

ನೆಲಮಂಗಲ: ಮಾವು,
ದೇವನಹಳ್ಳಿ: ದ್ರಾಕ್ಷಿ, ಮಾವು
ದೊಡ್ಡಬಳ್ಳಾಪುರ: ದ್ರಾಕ್ಷಿ, ಮಾವು
ಹೊಸಕೋಟೆ: ದ್ರಾಕ್ಷಿ, ಮಾವು

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂ ಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತ ಬಾಂಧವರು ಸದರಿ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು Fruits ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ಸದರಿ ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಸದರಿ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

ಬೆಳೆ ವಿಮಾ ಕಂತಿನ ವಿವರಗಳು

ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಮಾವು ಬೆಳೆಗೆ
ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ 80,000. ರೈತರು ಪಾವತಿಸಬೇಕಾದ‌ ದರ ಶೇಕಡಾ (5%) ರೂಗಳಲ್ಲಿ 4,000.

ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ ವಿಮಾ ಮೊತ್ತ ₹ 2,80,000/, ರೈತರು ಪಾವತಿಸಬೇಕಾದ ದರ ಶೇಕಡಾ (5%) ರೂ. ಗಳಲ್ಲಿ ₹14,000.

ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ31ಕ್ಕೆ ಕಡೆ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೇವನಹಳ್ಳಿ
9448825101.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೊಡ್ಡಬಳ್ಳಾಪುರ
9880210892.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಹೊಸಕೋಟೆ
8217210320.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ನೆಲಮಂಗಲ
9880461607.

ವಿಮಾ ಕಂಪನಿಯ ದೂರವಾಣಿ ಸಂಖ್ಯೆ — 9966222561 ಸಹಾಯವಾಣಿ ಸಂಖ್ಯೆ-18004250505 ಸಂಪರ್ಕಿಸಬಹುದು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago