ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಿ

2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಕಂದಾಯ ರಶೀದಿ, ಖಾತೆ ಪುಸ್ತಕ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಾಯಿಸುವುದು.

ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.
ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9480461234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880210892, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 8217210320, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯ ಸಹಾಯವಾಣಿ ಸಂಖ್ಯೆ- 08026564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

11 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

15 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

15 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

23 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago