Categories: ರಾಜ್ಯ

ಹವಾಮಾನ ವೈಪರಿತ್ಯ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಚಾ ಸೈಕ್ಲೋನ್ ನಂತರ ಬಿಪರ್‌ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ಬಿಪರ್‌ಜಾಯ್ ಎಫೆಕ್ಟ್ ನಾಳೆಯಿಂದ ಜೂನ್ 10ರವರೆಗೆ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ‌ ಇದೆ.

ಈ ಸೈಕ್ಲೋನ್‌ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದೆ ಎನ್ನಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆ ಸಹ ಇದೆ.

4 ದಿನ ಮೀನುಗಾರಾರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿರುವ ಸಂಬಂಧಿಸಿದ ಇಲಾಖೆ. ಚಂಡಮಾರುತ ಹಿನ್ನೆಲೆ 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿರುವ ಮುಂಗಾರು.

ಚಂಡಮಾರುತ ಹಿ‌ನ್ನೆಲೆ, ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ, ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಸದ್ಯ ಚಂಡಮಾರುತ ಹಿನ್ನೆಲೆ, ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ‌ ಇದೆ.

ಕರಾವಳಿ ಕರ್ನಾಟಕ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ

ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ

ದಕ್ಷಿಣ ಒಳನಾಡು
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ

Ramesh Babu

Journalist

Recent Posts

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 hours ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

4 hours ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

4 hours ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

17 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

17 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

1 day ago