ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಚಾ ಸೈಕ್ಲೋನ್ ನಂತರ ಬಿಪರ್ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ಬಿಪರ್ಜಾಯ್ ಎಫೆಕ್ಟ್ ನಾಳೆಯಿಂದ ಜೂನ್ 10ರವರೆಗೆ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ.
ಈ ಸೈಕ್ಲೋನ್ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದೆ ಎನ್ನಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆ ಸಹ ಇದೆ.
ಚಂಡಮಾರುತ ಹಿನ್ನೆಲೆ, ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ, ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಸದ್ಯ ಚಂಡಮಾರುತ ಹಿನ್ನೆಲೆ, ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ
ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ
ದಕ್ಷಿಣ ಒಳನಾಡು
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…