ಹವಾಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೋಚಾ ಸೈಕ್ಲೋನ್ ನಂತರ ಬಿಪರ್ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ಬಿಪರ್ಜಾಯ್ ಎಫೆಕ್ಟ್ ನಾಳೆಯಿಂದ ಜೂನ್ 10ರವರೆಗೆ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಮೂರು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ.
ಈ ಸೈಕ್ಲೋನ್ ವೇಗ ಆರಂಭದಲ್ಲಿ ಪ್ರತಿ ಗಂಟೆಗೆ 45-55 ಕಿಲೋ ಮೀಟರ್ ಇರಲಿದೆ ಎನ್ನಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕರ್ನಾಟಕದ ದಕ್ಷಿಣ ಒಳನಾಡ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ 2-3 ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರಿ ಅಲೆ ಎಚ್ಚರಿಕೆ ಸಹ ಇದೆ.
ಚಂಡಮಾರುತ ಹಿನ್ನೆಲೆ, ಮುಂಗಾರು ಕೂಡ ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ, ಈ ಹಿಂದೆ ಜೂನ್ 3, 4ನೇ ತಾರೀಖು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ತಿಳಿಸಿದ್ದ ಹವಾಮಾನ ಇಲಾಖೆ, ಸದ್ಯ ಚಂಡಮಾರುತ ಹಿನ್ನೆಲೆ, ಮುಂಗಾರು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ
ಉತ್ತರ ಒಳನಾಡು
ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ
ದಕ್ಷಿಣ ಒಳನಾಡು
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆ
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…