ಹವಾಮಾನ ವೈಪರೀತ್ಯದಿಂದ ಸೇವಂತಿಗೆ ಬೆಳೆದಿದ್ದ ರೈತನಿಗೆ ನಷ್ಟ: ಶ್ರಾವಣದಲ್ಲಿ ಉತ್ತಮ ಬೆಲೆ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಸಂಕಷ್ಟ

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.

ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪು‌ರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.

ಇನ್ನೂ ಹೂವಿನ ಬೆಳೆ ಬೆಳೆಯಲು ಕನಿಷ್ಠ ನಾಲ್ಕು ತಿಂಗಳು ಬೇಕು. ಮೊದಲ ಕಟಾವು ಮಾಡುವ ಹಂತಕ್ಕೆ ಬರುವ ವೇಳೆಗೆ ಸಾಕಷ್ಟು ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಹೂ ಕಟಾವಿಗೆ ಬಂದ ನಂತರವೂ 10 ದಿನಕ್ಕೆ ಒಮ್ಮೆ ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಒಂದು ಬಾರಿ ಔಷಧಿ ಸಿಂಪಡಣೆ ಮಾಡಲು ಕನಿಷ್ಠ 10 ಸಾವಿರ ಆದರೂ ಬೇಕಾಗುತ್ತದೆ‌. ಹಾಗಾಗಿ ಉಳುಮೆಯಿಂದ ಕಟಾವಿನ ಹಂತಕ್ಕೆ ಬರುವ ವೇಳೆ ಲಕ್ಷಾಂತರ ರುಪಾಯಿ ಹಣವನ್ನ ಸಾಲ ಮಾಡಿರುತ್ತೇವೆ. ಉತ್ತಮ ಬೆಲೆ ಸಿಗುತ್ತದೆ ಎನ್ನುವಷ್ಟರಲ್ಲಿ ಈ ರೀತಿ ಆದರೆ ಹೇಗೆ ಎಂದು ತಾಲೂಕಿನ ರೈತ ವಾಸುದೇವ್ ಅವರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago