ಹವಾಮಾನ ವೈಪರೀತ್ಯದಿಂದ ಸೇವಂತಿಗೆ ಬೆಳೆದಿದ್ದ ರೈತನಿಗೆ ನಷ್ಟ: ಶ್ರಾವಣದಲ್ಲಿ ಉತ್ತಮ ಬೆಲೆ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಸಂಕಷ್ಟ

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.

ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪು‌ರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.

ಇನ್ನೂ ಹೂವಿನ ಬೆಳೆ ಬೆಳೆಯಲು ಕನಿಷ್ಠ ನಾಲ್ಕು ತಿಂಗಳು ಬೇಕು. ಮೊದಲ ಕಟಾವು ಮಾಡುವ ಹಂತಕ್ಕೆ ಬರುವ ವೇಳೆಗೆ ಸಾಕಷ್ಟು ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಹೂ ಕಟಾವಿಗೆ ಬಂದ ನಂತರವೂ 10 ದಿನಕ್ಕೆ ಒಮ್ಮೆ ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಒಂದು ಬಾರಿ ಔಷಧಿ ಸಿಂಪಡಣೆ ಮಾಡಲು ಕನಿಷ್ಠ 10 ಸಾವಿರ ಆದರೂ ಬೇಕಾಗುತ್ತದೆ‌. ಹಾಗಾಗಿ ಉಳುಮೆಯಿಂದ ಕಟಾವಿನ ಹಂತಕ್ಕೆ ಬರುವ ವೇಳೆ ಲಕ್ಷಾಂತರ ರುಪಾಯಿ ಹಣವನ್ನ ಸಾಲ ಮಾಡಿರುತ್ತೇವೆ. ಉತ್ತಮ ಬೆಲೆ ಸಿಗುತ್ತದೆ ಎನ್ನುವಷ್ಟರಲ್ಲಿ ಈ ರೀತಿ ಆದರೆ ಹೇಗೆ ಎಂದು ತಾಲೂಕಿನ ರೈತ ವಾಸುದೇವ್ ಅವರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

10 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

20 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

20 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago