ಹವಾಮಾನ ವೈಪರೀತ್ಯದಿಂದ ಸೇವಂತಿಗೆ ಬೆಳೆದಿದ್ದ ರೈತನಿಗೆ ನಷ್ಟ: ಶ್ರಾವಣದಲ್ಲಿ ಉತ್ತಮ ಬೆಲೆ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಸಂಕಷ್ಟ

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.

ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪು‌ರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.

ಇನ್ನೂ ಹೂವಿನ ಬೆಳೆ ಬೆಳೆಯಲು ಕನಿಷ್ಠ ನಾಲ್ಕು ತಿಂಗಳು ಬೇಕು. ಮೊದಲ ಕಟಾವು ಮಾಡುವ ಹಂತಕ್ಕೆ ಬರುವ ವೇಳೆಗೆ ಸಾಕಷ್ಟು ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಹೂ ಕಟಾವಿಗೆ ಬಂದ ನಂತರವೂ 10 ದಿನಕ್ಕೆ ಒಮ್ಮೆ ಔಷಧಿ ಸಿಂಪಡಣೆ ಮಾಡಬೇಕಾಗುತ್ತದೆ. ಒಂದು ಬಾರಿ ಔಷಧಿ ಸಿಂಪಡಣೆ ಮಾಡಲು ಕನಿಷ್ಠ 10 ಸಾವಿರ ಆದರೂ ಬೇಕಾಗುತ್ತದೆ‌. ಹಾಗಾಗಿ ಉಳುಮೆಯಿಂದ ಕಟಾವಿನ ಹಂತಕ್ಕೆ ಬರುವ ವೇಳೆ ಲಕ್ಷಾಂತರ ರುಪಾಯಿ ಹಣವನ್ನ ಸಾಲ ಮಾಡಿರುತ್ತೇವೆ. ಉತ್ತಮ ಬೆಲೆ ಸಿಗುತ್ತದೆ ಎನ್ನುವಷ್ಟರಲ್ಲಿ ಈ ರೀತಿ ಆದರೆ ಹೇಗೆ ಎಂದು ತಾಲೂಕಿನ ರೈತ ವಾಸುದೇವ್ ಅವರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago