ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.
ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪುರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.
ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…