ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ ಕಾಟ ಸೇರಿದಂತೆ ಇತರೆ ಸಮಸ್ಯೆಗಳು ಶುರುವಾಗಿದೆ. ಶ್ರಾವಣದಲ್ಲಿ ಉತ್ತಮ ದರ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸನ್ನ ಊಜಿ ಸೇರಿದಂತೆ ಹಾನಿಕಾರಕ ಕೀಟಗಳು ಭಗ್ನಗೊಳಿಸಿವೆ.
ಹೌದು.. ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡದ ಬುಡಗಳು ಕೊಳೆಯುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಗುತ್ತದೆ. ಮಾರುಕಟ್ಟೆಯಲ್ಲಿ ಉತ್ತಮ ದರ ಸಿಕ್ಕಿ ಮಾಡಿದ ಸಾಲ ಎಲ್ಲಾ ತೀರಿಸಿಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದುಕಡೆ ಜಡಿ ಮಳೆ, ಮತ್ತೊಂದು ಕಡೆ ಆಷಾಢ ಗಾಳಿ, ಮಳೆ ಶಾಕ್ ಕೊಟ್ಟಿದೆ. ಕಳೆದ ಕೆಲ ದಿನಗಳಿಂದ ಬಿಟ್ಟೂಬಿಡದೆ ಬೀಳುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಸೇವಂತಿಗೆ ಹೂ ಗಿಡಗಳ ಬುಡಗಳು ಕೊಳೆಯುತ್ತಿವೆ. ಜೊತೆಗೆ ಹೂವಿಗೆ ಕಪ್ಪುರೋಗ ಬಂದು ಮಂಕುಬಡಿದಂತೆ ಆಗಿದೆ. ಹಾಗಾಗಿ ರೈತರು ಕಣ್ಣು ಮುಂದೆಯೇ ಹೂ ಗಿಡಗಳನ್ನು ಕಿತ್ತು ಹಾಕಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನೇನು ಬೆಳೆದ ಬೆಳೆ ನಮ್ಮ ಕೈ ಸೇರುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತರ ಕನಸಿಗೆ ಕೀಟಗಳು ತಣ್ಣೀರು ಎರಚಿವೆ.
ಒಟ್ಟಾರೆ ಉತ್ತಮ ಫಸಲು ಬಂದಾಗ ರೇಟ್ ಇರಲ್ಲ, ರೇಟ್ ಇದ್ದಾಗ ಫಸಲು ಇರಲ್ಲ, ಎರಡು ಇದ್ದಾಗ ಈ ರೀತಿ ಹವಾಮಾನ ವೈಪರೀತ್ಯಗಳಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಇನ್ನಾದರು ಅಧಿಕಾರಿಗಳು ರೈತರ ತೋಟಗಳತ್ತ ಮುಖ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…