ಹಸಿರುಮನೆ ನಿರ್ಮಾಣ ಘಟಕಕ್ಕೆ ಸಹಾಯಧನ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ  24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅನುಮೋದನೆಗೊಂಡಿರುತ್ತದೆ.

ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ.

2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಆಯ್ಕೆಯಾದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ದೇವನಹಳ್ಳಿ ತಾಲ್ಲೂಕಿನ ಗೊಡ್ಲುಮುದ್ದೇನಹಳ್ಳಿ, ಯಲಿಯೂರು, ಕೊಯಿರಾ ಗ್ರಾಮ ಪಂಚಾಯಿತಿಗಳಲ್ಲಿ.

ನೆಲಮಂಗಲ ತಾಲೂಕಿನ ಶ್ರೀನಿವಾಸಪುರ, ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ.

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡ ಅರಳಗೆರೆ, ಗಣಗಲೂರು, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ಅರುಳು ಮಲ್ಲಿಗೆ, ಆರೂಡಿ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹೊನ್ನಾವರ, ಹೊಸಹಳ್ಳಿ, ಹುಲಿಕುಂಟೆ, ಕನಸವಾಡಿ, ಕೆಸ್ತೂರು, ಕೊನ್ನಘಟ್ಟ, ಮಾಜರ ಹೊಸಹಳ್ಳಿ, ರಾಜಘಟ್ಟ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ/ಕೀಟ ಬಾಧೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ ಹಾಗೂ ಅಧಿಕ ಮೌಲ್ಯದ ತರಕಾರಿ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ ನೀಡಲಾಗುವುದು.

ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಆಸಕ್ತವಿರುವ ರೈತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಪ್ರಸಕ್ತ ಸಾಲಿನ ಪಹಣಿ (RTC)ಯೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರ ಕಚೇರಿಗೆ ಜೂನ್‌.17ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ: 9880210892, ದೇವನಹಳ್ಳಿ: 9448825101, ಹೊಸಕೋಟೆ: 8217210320, ನೆಲಮಂಗಲ: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ(ಜಿಪಂ) ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

5 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

9 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago