ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅನುಮೋದನೆಗೊಂಡಿರುತ್ತದೆ.
ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ.
2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಆಯ್ಕೆಯಾದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ದೇವನಹಳ್ಳಿ ತಾಲ್ಲೂಕಿನ ಗೊಡ್ಲುಮುದ್ದೇನಹಳ್ಳಿ, ಯಲಿಯೂರು, ಕೊಯಿರಾ ಗ್ರಾಮ ಪಂಚಾಯಿತಿಗಳಲ್ಲಿ.
ನೆಲಮಂಗಲ ತಾಲೂಕಿನ ಶ್ರೀನಿವಾಸಪುರ, ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ.
ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡ ಅರಳಗೆರೆ, ಗಣಗಲೂರು, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ.
ದೊಡ್ಡಬಳ್ಳಾಪುರ ತಾಲ್ಲೂಕಿನ ಅರುಳು ಮಲ್ಲಿಗೆ, ಆರೂಡಿ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹೊನ್ನಾವರ, ಹೊಸಹಳ್ಳಿ, ಹುಲಿಕುಂಟೆ, ಕನಸವಾಡಿ, ಕೆಸ್ತೂರು, ಕೊನ್ನಘಟ್ಟ, ಮಾಜರ ಹೊಸಹಳ್ಳಿ, ರಾಜಘಟ್ಟ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತದೆ.
ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ/ಕೀಟ ಬಾಧೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.
ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ ಹಾಗೂ ಅಧಿಕ ಮೌಲ್ಯದ ತರಕಾರಿ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ ನೀಡಲಾಗುವುದು.
ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಆಸಕ್ತವಿರುವ ರೈತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಪ್ರಸಕ್ತ ಸಾಲಿನ ಪಹಣಿ (RTC)ಯೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರ ಕಚೇರಿಗೆ ಜೂನ್.17ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ: 9880210892, ದೇವನಹಳ್ಳಿ: 9448825101, ಹೊಸಕೋಟೆ: 8217210320, ನೆಲಮಂಗಲ: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ(ಜಿಪಂ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…