ಹಸಿರುಮನೆ ನಿರ್ಮಾಣ ಘಟಕಕ್ಕೆ ಸಹಾಯಧನ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ  24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅನುಮೋದನೆಗೊಂಡಿರುತ್ತದೆ.

ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ.

2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಆಯ್ಕೆಯಾದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ದೇವನಹಳ್ಳಿ ತಾಲ್ಲೂಕಿನ ಗೊಡ್ಲುಮುದ್ದೇನಹಳ್ಳಿ, ಯಲಿಯೂರು, ಕೊಯಿರಾ ಗ್ರಾಮ ಪಂಚಾಯಿತಿಗಳಲ್ಲಿ.

ನೆಲಮಂಗಲ ತಾಲೂಕಿನ ಶ್ರೀನಿವಾಸಪುರ, ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ.

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡ ಅರಳಗೆರೆ, ಗಣಗಲೂರು, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ಅರುಳು ಮಲ್ಲಿಗೆ, ಆರೂಡಿ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹೊನ್ನಾವರ, ಹೊಸಹಳ್ಳಿ, ಹುಲಿಕುಂಟೆ, ಕನಸವಾಡಿ, ಕೆಸ್ತೂರು, ಕೊನ್ನಘಟ್ಟ, ಮಾಜರ ಹೊಸಹಳ್ಳಿ, ರಾಜಘಟ್ಟ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಟಾನಗೊಳಿಸಲಾಗುತ್ತದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ/ಕೀಟ ಬಾಧೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ ಹಾಗೂ ಅಧಿಕ ಮೌಲ್ಯದ ತರಕಾರಿ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ. 50ರ ಸಹಾಯಧನ ನೀಡಲಾಗುವುದು.

ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಪಡೆಯಲು ಆಸಕ್ತವಿರುವ ರೈತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಫಲಾನುಭವಿಯ ಭಾವಚಿತ್ರ ಹಾಗೂ ಪ್ರಸಕ್ತ ಸಾಲಿನ ಪಹಣಿ (RTC)ಯೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ರವರ ಕಚೇರಿಗೆ ಜೂನ್‌.17ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ: 9880210892, ದೇವನಹಳ್ಳಿ: 9448825101, ಹೊಸಕೋಟೆ: 8217210320, ನೆಲಮಂಗಲ: 9880461607 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ(ಜಿಪಂ) ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 hour ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

2 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

6 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

7 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

13 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

14 hours ago