ಬೆಂಗಳೂರು : ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ 7 ರನ್ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಸಿರು ಪೋಷಾಕಿನಲ್ಲಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭ ಉತ್ತಮವಾಗಿರಲಿಲ್ಲ ಆರಂಭಿಕ ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಟ್ರಿಂಟ್ ಬೋಲ್ಟ್ ಅವರ ಎಲ್ ಬಿ ಬಲೆಗೆ ಬಿದ್ದು ಗೋಲ್ಡನ್ ಡಕ್ ಔಟ್(0) ಆಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.
ನಂತರ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ (16) ರನ್ ಗಳಿಸಿ ತಂಡದ ಮೊತ್ತವನ್ನು 190 ರ ಗಡಿಗೆ ಕೊಂಡೊಯ್ದುರು, ರಾಜಸ್ತಾನ್ ರಾಯಲ್ಸ್ ಪರವಾಗಿ ಟ್ರಿಂಟ್ ಬೋಲ್ಟ್ ಹಾಗೂ ಸಂದೀಪ್ ಶರ್ಮ ತಲಾ ಎರಡು ವಿಕೆಟ್ ಪಡೆದರು.
ಸಂಜು ಸ್ಯಾಮ್ಸನ್ (22) ಹಾಗೂ ದ್ರುವ್ ಜುರೇಲ್ (34) ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ, ಆರ್ ಸಿಬಿ ಪರವಾಗಿ ಹಷ೯ಲ್ ಪಟೇಲ್ ಮೂರು ವಿಕೆಟ್ ಪಡೆದರು, ಸ್ಪೋಟಕ ಬ್ಯಾಟಿಂಗ್ ಮಾಡಿದ ಗ್ಲೇನ್ ಮ್ಯಾಕ್ಸವೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…