ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ ನೀಡೋದೆ ಈತನ ಕೆಲಸ.
ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.
ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…