ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ ನೀಡೋದೆ ಈತನ ಕೆಲಸ.
ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.
ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…