ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ ನೀಡೋದೆ ಈತನ ಕೆಲಸ.
ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.
ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…