ಹಸಿವು, ಆನಾರೋಗ್ಯ, ಅಪಘಾತದಲ್ಲಿ ಗಾಯಗೊಂಡ ಪ್ರಾಣಿ-ಪಕ್ಷಿಗಳಿಗೆ ನೆರವಾದ ದಂಪತಿ: ಯಾವ ಸ್ವಾರ್ಥವೂ ಇಲ್ಲದೆ 200ಕ್ಕೂ ಅಧಿಕ ಬೀದಿನಾಯಿಗಳ ಸಂರಕ್ಷಣೆ

ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.

ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ‌ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ‌ ನೀಡೋದೆ ಈತನ ಕೆಲಸ.

ಸುಮಾರು ಒಂದು ಎಕರೆ ಖಾಲಿ ಜಮೀನಿನಲ್ಲಿ ಸ್ವತಂತ್ರವಾಗಿ, ಸ್ವಚ್ಚಂದವಾಗಿ ಓಡಾಡುತ್ತಿರುವ ನೂರಾರು ಬೀದಿ ನಾಯಿಗಳು.. ಅಪಘಾತದಲ್ಲಿ ಸೊಂಟ, ಕಾಲು ಸೇರಿದಂತೆ ಅಂಗಾಂಗ ಡ್ಯಾಮೇಜ್ ಮಾಡಿಕೊಂಡು ಹಾರೈಕೆಯಾಗುತ್ತಿರುವ ಮೂಕ ಪ್ರಾಣಿಗಳು…

ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.

ಈ ದಂಪತಿ ಮೂಲತಃಹ ಪಂಜಾಬ್ ರಾಜ್ಯದವರು. ಸೂರ್ಯ ಪ್ರತಾಪ್ ಸಿಂಗ್ ಮತ್ತು ಅಂಜು ಅನ್ನೂ ಈ ದಂಪತಿ ಕಳೆದ ಕೆಲ ವರ್ಷಗಳಿಂದೆ ಮನೆಯಲ್ಲಿ ನಾಯಿಯನ್ನ ಸಾಕಿದ್ದು, ಮನೆಯಿಂದ ತಪ್ಪಿಹೋದ ನಾಯಿ ಅಪಘಾತದಲ್ಲಿ ಗಾಯಗೊಂಡು ದುರ್ಮರಣಕ್ಕೀಡಾಗುತ್ತದೆ. ಹೀಗಾಗಿ ತಮ್ಮ ಸಾಕು ನಾಯಿ ನರಳಾಡಿ ಸಾವನ್ನಪಿದ್ದನ್ನ ಕಂಡ ದಂಪತಿ ಬೇರೆ ನಾಯಿಗಳು ಈ ರೀತಿ ಹಾರೈಕೆಯಿಲ್ಲದೆ ಸಾವನ್ನಪ್ಪಬಾರದು ಎಂದು ನಿರ್ಧಾರ ಮಾಡಿದ್ದು, ಅಂದಿನಿಂದ ನಾಯಿಗಳನ್ನ ಮಕ್ಕಳಂತೆ ಸಾಕಲು ಮುಂದಾಗಿದ್ದಾರೆ.

ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಗಾಯಗೊಂಡ ಮತ್ತು ಅಪಘಾತಕ್ಕೀಡಾದ ನಾಯಿಗಳನ್ನ ತಂದು ಸಾಕುತ್ತಾ ಅವುಗಳ ಹಾರೈಕೆ ಮಾಡುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.

ಅಲ್ಲದೆ, ಈ  ಸೂರ್ಯ ಪ್ರತಾಪ್ ಸಿಂಗ್ ಮಾರ್ಕೆಂಟಿಗ್ ಕೆಲಸ ಸಹ ಮಾಡಿಕೊಂಡು ಬಂದ ಹಣದಿಂದ ನಿತ್ಯ ಮೂಕ ಪ್ರಾಣಿಗಳಿಗೆ ಆಹಾರ ತಯಾರಿಸಿ ಶೇಡ್ ಮಾತ್ರವಲ್ಲದೆ ರಸ್ತೆ ಬದಿಯಲ್ಲಿನ ಪ್ರಾಣಿಗಳಿಗೆ ನೀಡುತ್ತಿದ್ದಾರೆ. ಇನ್ನೂ ದಂಪತಿಯ ಪ್ರಾಣಿ ಪ್ರೀತಿಯನ್ನ ಕಂಡು ಕೆಲವರು ಆಗಾಗ ಸಹಾಯ ಸಹ ಮಾಡ್ತಿದ್ದು ಅನಾರೋಗ್ಯದಿಂದ ಬಳಲುತ್ತಿರುವ ದಂಪತಿ ನಾವಿರುವವರಗೂ ಮೂಖ ಪ್ರಾಣಿಗಳ ಹಾರೈಕೆ ಮಾಡ್ತಿವಿ ಅಂತ ಶಪಥ ಮಾಡಿದ್ದಾರೆ.

ಒಟ್ಟಾರೆ, ಕಷ್ಟಾ ಅಂದ್ರೆ ಹೆತ್ತ ತಂದೆ ತಾಯಿ ಸೇರಿದಂತೆ ಒಡ ಹುಟ್ಟಿದವರನ್ನು ನೋಡಿಕೊಳ್ಳದ ಈ ಕಾಲದಲ್ಲಿ ಗಾಯಗೊಂಡ ಪ್ರಾಣಿಗಳನ್ನ ಹೊತ್ತು ತಂದು ಮಕ್ಕಳಂತೆ ಹಾರೈಕೆ ಮಾಡುತ್ತಾ ಅವುಗಳ ಪೋಷಣೆ ಮಾಡ್ತಿರುವ ದಂಪತಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

60 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago