ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ ನೀಡೋದೆ ಈತನ ಕೆಲಸ.
ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.
ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…