ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ ನೀಡೋದೆ ಈತನ ಕೆಲಸ.
ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.
ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…