ಹಸಿವು, ಆನಾರೋಗ್ಯ, ಅಪಘಾತದಲ್ಲಿ ಗಾಯಗೊಂಡ ಪ್ರಾಣಿ-ಪಕ್ಷಿಗಳಿಗೆ ನೆರವಾದ ದಂಪತಿ: ಯಾವ ಸ್ವಾರ್ಥವೂ ಇಲ್ಲದೆ 200ಕ್ಕೂ ಅಧಿಕ ಬೀದಿನಾಯಿಗಳ ಸಂರಕ್ಷಣೆ

ಸಾಮನ್ಯವಾಗಿ ಬೀದಿನಾಯಿ ಅಂದರೆ ಸಾಕು ಜನರಿಗೆ ಕಚ್ಚುತ್ತೆ, ಪ್ರತಿದಿನ ಊಟ ಹಾಕಬೇಕು, ಗಲೀಜು ಮಾಡುತ್ತೆ ಎಂದು ದೂರ ಹೋಗುತ್ತಾರೆ. ಆದರೆ, ಇಲ್ಲೊಂದು ದಂಪತಿ ಯಾವುದೇ ಸ್ವಾರ್ಥವಿಲ್ಲದೇ ಬೀದಿ ನಾಯಿಗಳ ಸಂರಕ್ಷಣೆಗಾಗಿಯೇ ಒಂದು ಸಂಸ್ಥೆಯನ್ನು ಸ್ಥಾಪಿಸಿ ಹಸಿವಿನಿಂದ, ಅನಾರೋಗ್ಯದಿಂದ ಮತ್ತು ಅಪಘಾತವಾದ ಬೀದಿನಾಯಿಗಳಿಗೆ ಚಿಕಿತ್ಸೆ ಕೊಡಿಸಿ, ಶೇಲ್ಟರ್ ನಲ್ಲಿ ರಕ್ಷಣೆ ನೀಡಲಾಗುತ್ತಿದೆ.

ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ಇನ್ನೆಲ್ಲೋ ಯಾರದ್ದೊ‌ ವಾಹನಕ್ಕೆ ಅಕಸ್ಮಿಕವಾಗಿ ಸಿಲುಕಿ ಗಾಯಗೊಂಡ ನಾಯಿಗಳು ಆತನ ಕಣ್ಣಿಗೆ ಅಥವಾ ಗಮನಕ್ಕೆ ಬಂದರೆ ಸಾಕು ಅಲ್ಲಿಗೆ ದೌಡಾಯಿಸಿ ಆ ಗಾಯಗೊಂಡ ನಾಯಿಗೆ ಚಿಕಿತ್ಸೆ ಕೊಡಿಸಿ ಆಶ್ರಯ‌ ನೀಡೋದೆ ಈತನ ಕೆಲಸ.

ಸುಮಾರು ಒಂದು ಎಕರೆ ಖಾಲಿ ಜಮೀನಿನಲ್ಲಿ ಸ್ವತಂತ್ರವಾಗಿ, ಸ್ವಚ್ಚಂದವಾಗಿ ಓಡಾಡುತ್ತಿರುವ ನೂರಾರು ಬೀದಿ ನಾಯಿಗಳು.. ಅಪಘಾತದಲ್ಲಿ ಸೊಂಟ, ಕಾಲು ಸೇರಿದಂತೆ ಅಂಗಾಂಗ ಡ್ಯಾಮೇಜ್ ಮಾಡಿಕೊಂಡು ಹಾರೈಕೆಯಾಗುತ್ತಿರುವ ಮೂಕ ಪ್ರಾಣಿಗಳು…

ಈ ಬೀದಿ ಬದಿಯ ಪ್ರಾಣಿಗಳಿಗೆ ಸ್ವಂತ ದುಡಿದ ಹಣದಿಂದ ಆಹಾರ ಸಿದ್ದಪಡಿಸುತ್ತಿರುವ ದಂಪತಿ…. ಹೌದು ಅಂದಹಾಗೆ ಮೂಖ ಪ್ರಾಣಿಗಳ ಹಾರೈಕೆಯಲ್ಲಿ ದಂಪತಿಗಳು ತಮ್ಮನ್ನ ತಾವು ತೋಡಗಿಸಿಕೊಂಡಿರುವುದು ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಬ್ಯಾತ ಗ್ರಾಮದ ಬಳಿ.

ಈ ದಂಪತಿ ಮೂಲತಃಹ ಪಂಜಾಬ್ ರಾಜ್ಯದವರು. ಸೂರ್ಯ ಪ್ರತಾಪ್ ಸಿಂಗ್ ಮತ್ತು ಅಂಜು ಅನ್ನೂ ಈ ದಂಪತಿ ಕಳೆದ ಕೆಲ ವರ್ಷಗಳಿಂದೆ ಮನೆಯಲ್ಲಿ ನಾಯಿಯನ್ನ ಸಾಕಿದ್ದು, ಮನೆಯಿಂದ ತಪ್ಪಿಹೋದ ನಾಯಿ ಅಪಘಾತದಲ್ಲಿ ಗಾಯಗೊಂಡು ದುರ್ಮರಣಕ್ಕೀಡಾಗುತ್ತದೆ. ಹೀಗಾಗಿ ತಮ್ಮ ಸಾಕು ನಾಯಿ ನರಳಾಡಿ ಸಾವನ್ನಪಿದ್ದನ್ನ ಕಂಡ ದಂಪತಿ ಬೇರೆ ನಾಯಿಗಳು ಈ ರೀತಿ ಹಾರೈಕೆಯಿಲ್ಲದೆ ಸಾವನ್ನಪ್ಪಬಾರದು ಎಂದು ನಿರ್ಧಾರ ಮಾಡಿದ್ದು, ಅಂದಿನಿಂದ ನಾಯಿಗಳನ್ನ ಮಕ್ಕಳಂತೆ ಸಾಕಲು ಮುಂದಾಗಿದ್ದಾರೆ.

ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಗಾಯಗೊಂಡ ಮತ್ತು ಅಪಘಾತಕ್ಕೀಡಾದ ನಾಯಿಗಳನ್ನ ತಂದು ಸಾಕುತ್ತಾ ಅವುಗಳ ಹಾರೈಕೆ ಮಾಡುತ್ತಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ನಾಯಿಗಳನ್ನ ಸಾಕಾಣಿಕೆ ಮಾಡುತ್ತಿರುವುದಕ್ಕೆ ಕೆಲವರು ದಂಪತಿಗಳ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಹಿನ್ನೆಲೆ ಈ ದಂಪತಿ ಸಿಟಿ ಔಟ್ ಸ್ಕಟ್ಸ್ ಗೆ ಬಂದಿದ್ದು, ರೈತರಿಂದ 1 ಎಕರೆ ಜಮೀನನ್ನ ವರ್ಷಕ್ಕೆ 60 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದುಕೊಂಡಿದ್ದಾರೆ. ಜೊತೆಗೆ ಬಾಡಿಗೆ ಪಡೆದ ಜಮೀನಿನಲ್ಲಿ ಶೇಡ್ ಮತ್ತು ಕಾಂಪೋಂಡ್ ನಿರ್ಮಾಣ ಮಾಡಿಕೊಂಡು ಸುಮಾರು 200ಕ್ಕೂ ಅಧಿಕ ನಾಯಿಗಳು, ಮೊಲ, ಬೆಕ್ಕು, ಹಸು ಅಂತಹ ಮೂಕ ಪ್ರಾಣಿಗಳನ್ನ ಪೋಷಣೆ ಮಾಡುತ್ತಿದ್ದಾರೆ.

ಅಲ್ಲದೆ, ಈ  ಸೂರ್ಯ ಪ್ರತಾಪ್ ಸಿಂಗ್ ಮಾರ್ಕೆಂಟಿಗ್ ಕೆಲಸ ಸಹ ಮಾಡಿಕೊಂಡು ಬಂದ ಹಣದಿಂದ ನಿತ್ಯ ಮೂಕ ಪ್ರಾಣಿಗಳಿಗೆ ಆಹಾರ ತಯಾರಿಸಿ ಶೇಡ್ ಮಾತ್ರವಲ್ಲದೆ ರಸ್ತೆ ಬದಿಯಲ್ಲಿನ ಪ್ರಾಣಿಗಳಿಗೆ ನೀಡುತ್ತಿದ್ದಾರೆ. ಇನ್ನೂ ದಂಪತಿಯ ಪ್ರಾಣಿ ಪ್ರೀತಿಯನ್ನ ಕಂಡು ಕೆಲವರು ಆಗಾಗ ಸಹಾಯ ಸಹ ಮಾಡ್ತಿದ್ದು ಅನಾರೋಗ್ಯದಿಂದ ಬಳಲುತ್ತಿರುವ ದಂಪತಿ ನಾವಿರುವವರಗೂ ಮೂಖ ಪ್ರಾಣಿಗಳ ಹಾರೈಕೆ ಮಾಡ್ತಿವಿ ಅಂತ ಶಪಥ ಮಾಡಿದ್ದಾರೆ.

ಒಟ್ಟಾರೆ, ಕಷ್ಟಾ ಅಂದ್ರೆ ಹೆತ್ತ ತಂದೆ ತಾಯಿ ಸೇರಿದಂತೆ ಒಡ ಹುಟ್ಟಿದವರನ್ನು ನೋಡಿಕೊಳ್ಳದ ಈ ಕಾಲದಲ್ಲಿ ಗಾಯಗೊಂಡ ಪ್ರಾಣಿಗಳನ್ನ ಹೊತ್ತು ತಂದು ಮಕ್ಕಳಂತೆ ಹಾರೈಕೆ ಮಾಡುತ್ತಾ ಅವುಗಳ ಪೋಷಣೆ ಮಾಡ್ತಿರುವ ದಂಪತಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

40 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago