ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಆಗಲಿದೆ.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.
4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…