Categories: ರಾಜ್ಯ

ಹಸಿವು ಮುಕ್ತ ಕರ್ನಾಟಕವನ್ನಾಗಿಸಲು ಅನ್ನಭಾಗ್ಯ ಯೋಜನೆ: 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಚಾಲನೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಆಗಲಿದೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ? ಎಂದು ಪ್ರಶ್ನೆ ಮಾಡಿದರು.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago