Categories: ರಾಜ್ಯ

ಹಸಿವು ಮುಕ್ತ ಕರ್ನಾಟಕವನ್ನಾಗಿಸಲು ಅನ್ನಭಾಗ್ಯ ಯೋಜನೆ: 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಚಾಲನೆ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಆಗಲಿದೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ. ಕೆ.ಜಿ ಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ? ಎಂದು ಪ್ರಶ್ನೆ ಮಾಡಿದರು.

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago