ಕೋಲಾರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸ ಮನಸ್ಥಿತಿಯ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ ಅಮಾನುಷ ಕೃತ್ಯವಾಗಿದ್ದು ವಿಕೃತಿ ಮೆರೆದಿರುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅದಕ್ಕೆ ಇಂತಹ ಘಟನೆಗಳೇ ಜೀವಂತ ಸಾಕ್ಷಿಯಾಗಿವೆ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ಕಾಲಿಗೆ ಮಚ್ಚಿನಿಂದ ಹೊಡೆದಿದ್ದರೂ ಕ್ರಮ ವಹಿಸಿಲ್ಲ ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಇಷ್ಟು ದಿನ ಜನರಿಗೆ ರಕ್ಷಣೆ ಇಲ್ಲವಾಗಿತ್ತು ಈಗ ಗೋವುಗಳಿಗೂ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದರು.
ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಸುವಿನ ಹಾಲು ಅವಶ್ಯಕತೆ ಇದೆ ಮನುಷ್ಯನ ಹಸಿವಿನ ಕೊರತೆ ನೀಗಿಸುವ ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ನೀಚರಿಗೆ ಕಾಂಗ್ರೆಸ್ ಸರ್ಕಾರವು ಬೆಂಬಲವಾಗಿ ನಿಂತಿದೆ ಎಂಬುದು ಅನುಮಾನ ಮೂಡುತ್ತದೆ ಹಿಂದೂಗಳ ಹಾಗೂ ಗೋವುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದೆ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರ ಕಛೇರಿಗಳ ಮುಂದೆ ಹಸುಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…