ಕೋಲಾರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸ ಮನಸ್ಥಿತಿಯ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ ಅಮಾನುಷ ಕೃತ್ಯವಾಗಿದ್ದು ವಿಕೃತಿ ಮೆರೆದಿರುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅದಕ್ಕೆ ಇಂತಹ ಘಟನೆಗಳೇ ಜೀವಂತ ಸಾಕ್ಷಿಯಾಗಿವೆ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ಕಾಲಿಗೆ ಮಚ್ಚಿನಿಂದ ಹೊಡೆದಿದ್ದರೂ ಕ್ರಮ ವಹಿಸಿಲ್ಲ ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಇಷ್ಟು ದಿನ ಜನರಿಗೆ ರಕ್ಷಣೆ ಇಲ್ಲವಾಗಿತ್ತು ಈಗ ಗೋವುಗಳಿಗೂ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದರು.
ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಸುವಿನ ಹಾಲು ಅವಶ್ಯಕತೆ ಇದೆ ಮನುಷ್ಯನ ಹಸಿವಿನ ಕೊರತೆ ನೀಗಿಸುವ ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ನೀಚರಿಗೆ ಕಾಂಗ್ರೆಸ್ ಸರ್ಕಾರವು ಬೆಂಬಲವಾಗಿ ನಿಂತಿದೆ ಎಂಬುದು ಅನುಮಾನ ಮೂಡುತ್ತದೆ ಹಿಂದೂಗಳ ಹಾಗೂ ಗೋವುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದೆ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರ ಕಛೇರಿಗಳ ಮುಂದೆ ಹಸುಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…