Categories: ಕೋಲಾರ

ಹಸುಗಳ ಕೆಚ್ಚಲು ಕೊಯ್ದು ಅಮಾನವೀಯ ಕೃತ್ಯ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮಕ್ಕೆ ಕೊಮ್ಮನಹಳ್ಳಿ ಆನಂದ್ ಆಗ್ರಹ

ಕೋಲಾರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸ ಮನಸ್ಥಿತಿಯ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ ಅಮಾನುಷ ಕೃತ್ಯವಾಗಿದ್ದು ವಿಕೃತಿ ಮೆರೆದಿರುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅದಕ್ಕೆ ಇಂತಹ ಘಟನೆಗಳೇ ಜೀವಂತ ಸಾಕ್ಷಿಯಾಗಿವೆ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ಕಾಲಿಗೆ ಮಚ್ಚಿನಿಂದ ಹೊಡೆದಿದ್ದರೂ ಕ್ರಮ ವಹಿಸಿಲ್ಲ ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಇಷ್ಟು ದಿನ ಜನರಿಗೆ ರಕ್ಷಣೆ ಇಲ್ಲವಾಗಿತ್ತು ಈಗ ಗೋವುಗಳಿಗೂ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದರು.

ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಸುವಿನ ಹಾಲು ಅವಶ್ಯಕತೆ ಇದೆ ಮನುಷ್ಯನ ಹಸಿವಿನ ಕೊರತೆ ನೀಗಿಸುವ ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ನೀಚರಿಗೆ ಕಾಂಗ್ರೆಸ್ ಸರ್ಕಾರವು ಬೆಂಬಲವಾಗಿ ನಿಂತಿದೆ ಎಂಬುದು ಅನುಮಾನ ಮೂಡುತ್ತದೆ ಹಿಂದೂಗಳ ಹಾಗೂ ಗೋವುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದೆ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರ ಕಛೇರಿಗಳ ಮುಂದೆ ಹಸುಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

37 minutes ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

6 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

18 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

18 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

18 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

18 hours ago