ಕೋಲಾರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸ ಮನಸ್ಥಿತಿಯ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ ಅಮಾನುಷ ಕೃತ್ಯವಾಗಿದ್ದು ವಿಕೃತಿ ಮೆರೆದಿರುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅದಕ್ಕೆ ಇಂತಹ ಘಟನೆಗಳೇ ಜೀವಂತ ಸಾಕ್ಷಿಯಾಗಿವೆ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ಕಾಲಿಗೆ ಮಚ್ಚಿನಿಂದ ಹೊಡೆದಿದ್ದರೂ ಕ್ರಮ ವಹಿಸಿಲ್ಲ ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಇಷ್ಟು ದಿನ ಜನರಿಗೆ ರಕ್ಷಣೆ ಇಲ್ಲವಾಗಿತ್ತು ಈಗ ಗೋವುಗಳಿಗೂ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದರು.
ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಸುವಿನ ಹಾಲು ಅವಶ್ಯಕತೆ ಇದೆ ಮನುಷ್ಯನ ಹಸಿವಿನ ಕೊರತೆ ನೀಗಿಸುವ ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ನೀಚರಿಗೆ ಕಾಂಗ್ರೆಸ್ ಸರ್ಕಾರವು ಬೆಂಬಲವಾಗಿ ನಿಂತಿದೆ ಎಂಬುದು ಅನುಮಾನ ಮೂಡುತ್ತದೆ ಹಿಂದೂಗಳ ಹಾಗೂ ಗೋವುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದೆ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರ ಕಛೇರಿಗಳ ಮುಂದೆ ಹಸುಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…
ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…
ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…
ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…