Categories: ಕೋಲಾರ

ಹಸುಗಳ ಕೆಚ್ಚಲು ಕೊಯ್ದು ಅಮಾನವೀಯ ಕೃತ್ಯ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮಕ್ಕೆ ಕೊಮ್ಮನಹಳ್ಳಿ ಆನಂದ್ ಆಗ್ರಹ

ಕೋಲಾರ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಕ್ಷಸ ಮನಸ್ಥಿತಿಯ ದುಷ್ಕರ್ಮಿಗಳು ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ ಅಮಾನುಷ ಕೃತ್ಯವಾಗಿದ್ದು ವಿಕೃತಿ ಮೆರೆದಿರುವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಘಟನೆ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಅದಕ್ಕೆ ಇಂತಹ ಘಟನೆಗಳೇ ಜೀವಂತ ಸಾಕ್ಷಿಯಾಗಿವೆ ಹಾಲು ಕೊಡುವ ಹಸುಗಳ ಕೆಚ್ಚಲು ಕೊಯ್ದು ಕಾಲಿಗೆ ಮಚ್ಚಿನಿಂದ ಹೊಡೆದಿದ್ದರೂ ಕ್ರಮ ವಹಿಸಿಲ್ಲ ಮಾನವೀಯತೆ ಇಲ್ಲದ ಕ್ರೂರಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ ಇಷ್ಟು ದಿನ ಜನರಿಗೆ ರಕ್ಷಣೆ ಇಲ್ಲವಾಗಿತ್ತು ಈಗ ಗೋವುಗಳಿಗೂ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದರು.

ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಸುವಿನ ಹಾಲು ಅವಶ್ಯಕತೆ ಇದೆ ಮನುಷ್ಯನ ಹಸಿವಿನ ಕೊರತೆ ನೀಗಿಸುವ ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ನೀಚರಿಗೆ ಕಾಂಗ್ರೆಸ್ ಸರ್ಕಾರವು ಬೆಂಬಲವಾಗಿ ನಿಂತಿದೆ ಎಂಬುದು ಅನುಮಾನ ಮೂಡುತ್ತದೆ ಹಿಂದೂಗಳ ಹಾಗೂ ಗೋವುಗಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದೆ ಸರ್ಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರ ಕಛೇರಿಗಳ ಮುಂದೆ ಹಸುಗಳ ಸಮೇತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

5 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago