ಹಸು ಮೈ ತೊಳೆಯಲು ಹೋದ ವ್ಯಕ್ತಿ ನೀರು ಪಾಲು?: ಮೃತ ದೇಹ ಪತ್ತೆಗಾಗಿ ಕಾರ್ಯಾಚರಣೆ

ಹಸು ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವ‌ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಒಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ರಾಂಪುರ ನಿವಾಸಿ ಕುಮಾರ್ (43), ಸಾವನಪ್ಪಿರುವ ದುರ್ದೈವಿ. ತನ್ನ ಬಳಿ‌ ಇದ್ದ ಆರು ಹಸುಗಳ ಮೈ ತೊಳೆಯಲು ಕಟ್ಟೆ ಬಳಿಗೆ ವ್ಯಕ್ತಿ ಹೋಗಿದ್ದಾನೆ. ಸಂಜೆ ಹಸುಗಳು ಮನೆಗೆ ಬಂದರೂ ಕುಮಾರ್ ಮನೆಗೆ ಬರಲಿಲ್ಲ. ಆಗ ಮೃತನ ಕುಟುಂಬಸ್ಥರು ಸ್ಥಳಕ್ಕೆ‌‌ ಹೋಗಿ ನೋಡಿದಾಗ ಚಪ್ಪಲಿ ಮತ್ತು ಕಡ್ಡಿ, ಮೊಬೈಲ್ ಬಿದ್ದಿತ್ತು ಎನ್ನಲಾಗಿದೆ. ಹಸು ಮೈ ತೊಳೆಯಲು ಹೋಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ತಕ್ಷಣ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂಜೆ ವೇಳೆ ಕತ್ತಲಿದ್ದರಿಂದ ಮೃತ‌ದೇಹ ಪತ್ತೆ ಕಾರ್ಯಾಚರಣೆ ಮಾಡಲು ಆಗಲಿಲ್ಲ.ಆದ್ದರಿಂದ ಇಂದು ಬೆಳಗ್ಗೆ ಅಗ್ನಿಶಾಮಕ ಸಿಬ್ಬಂದಿ ಮತ್ತು ದೊಡ್ಡಬೆಳವಂಗಲ ಪೋಲೀಸರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

12 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago