ಪ್ರಿಯತಮೆಗೆ ಮತ್ತೋರ್ವನ ಜೊತೆ ಮದುವೆ ವಿಚಾರ ತಿಳಿದು ಬ್ಲೇಡ್ ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ತಡರಾತ್ರಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಿತೀಶ್ ಆತ್ಮಹತ್ಯೆಗೆ ಯತ್ನ ಮಾಡಿರುವ ಪಾಗಲ್ ಪ್ರೇಮಿ. ಹಲವು ವರ್ಷಗಳಿಂದ ನಿತೀಶ್ ಬೆಂಗಳೂರು ಮೂಲದ ಯುವತಿಯ ಮೇಲೆ ಪ್ರೇಮಾಂಕುರವಾಗಿತ್ತು.
ಮಾ.15ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿರುವ ಕಲ್ಯಾಣ ಮಂಟಪದಲ್ಲಿ ತನ್ನ ಪ್ರೇಯಸಿಯ ಮದುವೆ ವಿಚಾರ ತಿಳಿದು ಪಾಗಲ್ ಪ್ರೇಮಿ ಕಂಡು ದಿಗ್ಭ್ರಮೆಗೊಂಡು,
ಮದುವೆ ಮನೆಯಲ್ಲೇ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ.
ಕೂಡಲೇ ಸ್ಥಳಕ್ಕೆ 112 ವಾಹನದ ಪೊಲೀಸರು ದೌಡಾಯಿಸಿ ರಕ್ತದ ಮಡುವಿನಲ್ಲಿ ಇದ್ದ ವ್ಯಕ್ತಿಯನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ. ನಿತೀಶ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಯಿಂದಾಗಿ ಮದುವೆ ಅರ್ಧಕ್ಕೆ ನಿಂತಿದ್ದು,
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮನನೊಂದ ಯುವಕ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ ಎನ್ನಲಾಗಿದೆ. ಮತ್ತೊಂದೆಡೆ ಯುವತಿ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಸತ್ಯಾಂಶ ಪೊಲೀಸ್ ತನಿಖೆ ನಂತರ ಹೊರಬೀಳಲಿದೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…