ಪ್ರಿಯತಮೆಗೆ ಮತ್ತೋರ್ವನ ಜೊತೆ ಮದುವೆ ವಿಚಾರ ತಿಳಿದು ಬ್ಲೇಡ್ ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ತಡರಾತ್ರಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಿತೀಶ್ ಆತ್ಮಹತ್ಯೆಗೆ ಯತ್ನ ಮಾಡಿರುವ ಪಾಗಲ್ ಪ್ರೇಮಿ. ಹಲವು ವರ್ಷಗಳಿಂದ ನಿತೀಶ್ ಬೆಂಗಳೂರು ಮೂಲದ ಯುವತಿಯ ಮೇಲೆ ಪ್ರೇಮಾಂಕುರವಾಗಿತ್ತು.
ಮಾ.15ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿರುವ ಕಲ್ಯಾಣ ಮಂಟಪದಲ್ಲಿ ತನ್ನ ಪ್ರೇಯಸಿಯ ಮದುವೆ ವಿಚಾರ ತಿಳಿದು ಪಾಗಲ್ ಪ್ರೇಮಿ ಕಂಡು ದಿಗ್ಭ್ರಮೆಗೊಂಡು,
ಮದುವೆ ಮನೆಯಲ್ಲೇ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ.
ಕೂಡಲೇ ಸ್ಥಳಕ್ಕೆ 112 ವಾಹನದ ಪೊಲೀಸರು ದೌಡಾಯಿಸಿ ರಕ್ತದ ಮಡುವಿನಲ್ಲಿ ಇದ್ದ ವ್ಯಕ್ತಿಯನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ. ನಿತೀಶ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಯಿಂದಾಗಿ ಮದುವೆ ಅರ್ಧಕ್ಕೆ ನಿಂತಿದ್ದು,
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮನನೊಂದ ಯುವಕ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ ಎನ್ನಲಾಗಿದೆ. ಮತ್ತೊಂದೆಡೆ ಯುವತಿ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಸತ್ಯಾಂಶ ಪೊಲೀಸ್ ತನಿಖೆ ನಂತರ ಹೊರಬೀಳಲಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…