ಪ್ರಿಯತಮೆಗೆ ಮತ್ತೋರ್ವನ ಜೊತೆ ಮದುವೆ ವಿಚಾರ ತಿಳಿದು ಬ್ಲೇಡ್ ನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ತಡರಾತ್ರಿ ತಾಲೂಕಿನ ಶ್ರೀ ಕ್ಷೇತ್ರ ಘಾಟಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಿತೀಶ್ ಆತ್ಮಹತ್ಯೆಗೆ ಯತ್ನ ಮಾಡಿರುವ ಪಾಗಲ್ ಪ್ರೇಮಿ. ಹಲವು ವರ್ಷಗಳಿಂದ ನಿತೀಶ್ ಬೆಂಗಳೂರು ಮೂಲದ ಯುವತಿಯ ಮೇಲೆ ಪ್ರೇಮಾಂಕುರವಾಗಿತ್ತು.
ಮಾ.15ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿರುವ ಕಲ್ಯಾಣ ಮಂಟಪದಲ್ಲಿ ತನ್ನ ಪ್ರೇಯಸಿಯ ಮದುವೆ ವಿಚಾರ ತಿಳಿದು ಪಾಗಲ್ ಪ್ರೇಮಿ ಕಂಡು ದಿಗ್ಭ್ರಮೆಗೊಂಡು,
ಮದುವೆ ಮನೆಯಲ್ಲೇ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ.
ಕೂಡಲೇ ಸ್ಥಳಕ್ಕೆ 112 ವಾಹನದ ಪೊಲೀಸರು ದೌಡಾಯಿಸಿ ರಕ್ತದ ಮಡುವಿನಲ್ಲಿ ಇದ್ದ ವ್ಯಕ್ತಿಯನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ. ನಿತೀಶ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ, ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಯಿಂದಾಗಿ ಮದುವೆ ಅರ್ಧಕ್ಕೆ ನಿಂತಿದ್ದು,
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮನನೊಂದ ಯುವಕ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ ಎನ್ನಲಾಗಿದೆ. ಮತ್ತೊಂದೆಡೆ ಯುವತಿ ಕಡೆಯವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಸತ್ಯಾಂಶ ಪೊಲೀಸ್ ತನಿಖೆ ನಂತರ ಹೊರಬೀಳಲಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…