ಹಾಜರಾತಿಗೆ ಮಾರ್ಕ್​ ಮಾಡಲು ಮುಖ್ಯೋಪಾಧ್ಯಯರ ಬಳಿ ಕೇಳಿದ ಶಿಕ್ಷಕಿ: ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಮುತ್ತು ನೀಡುವಂತೆ ಸಂಜ್ಞೆ‌  ಮಾಡಿದ ಹೆಡ್ ಮಾಸ್ಟರ್ : ಶಿಕ್ಷಕಿ ಮುಂದೆ ಹೆಡ್ ಮಾಸ್ಟರ್ ಅಸಭ್ಯ ವರ್ತನೆ: ನೆಟ್ಟಿಗರ ಆಕ್ರೋಶ

ಶಿಕ್ಷಕಿಯೊಬ್ಬರು ತಮ್ಮ ಹಾಜರಾತಿಗೆ ಮಾರ್ಕ್​ ಮಾಡಲು ಶಾಲೆಯ ಮುಖ್ಯೋಪಾಧ್ಯಯರ ಬಳಿ ಕೇಳಿದಾಗ ಆಗ ಆತ ಕೆನ್ನೆಗೆ ಮುತ್ತು ಕೊಟ್ಟರೆ ನೀಡುತ್ತೇನೆ ಎಂದು ಹೇಳಿದ್ದಾನೆ.

ಈ ಘಟನೆ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕೆನ್ನೆಗೆ ಮುತ್ತು ನೀಡುವಂತೆ ಕೇಳಿತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದಲ್ಲಿ ಸರ್ಕಾರಿ ಶಾಲೆಯ‌ ಶಿಕ್ಷಕರಿಗಾಗಿ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿತ್ತು. ಈ ವ್ಯವಸ್ಥೆ ಸಾಕಷ್ಟು ವಿರೋಧಗಳಿಗೆ ಕೂಡ ಎಡೆ ಮಾಡಿಕೊಟ್ಟಿತ್ತು. ಕೊನೆಗೆ ಯೋಗಿ ಅದಿತ್ಯನಾಥ್ ಸರ್ಕಾರ ಈ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಪ್ರಸ್ತುತ ತಡೆಹಿಡಿದಿದೆ. ಅದರ ಪರಿಣಾಮ ಶಿಕ್ಷಕಿಯರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ.

ಮುಖ್ಯೋಪಾಧ್ಯಯರ ಬಳಿ ಬಂದ ಮಹಿಳಾ ಶಿಕ್ಷಕಿ ತನ್ನ ಹಾಜರಾತಿ ಮಾರ್ಕ್ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಸಂಜ್ಞೆ ಮಾಡಿದ ಹೆಡ್​ ಮಾಸ್ಟರ್​ ಒಂದು ಮುತ್ತು ಕೊಡು ಮಾರ್ಕ್​ ಮಾಡ್ತೀನಿ ಎಂದಿದ್ದಾನೆ. ಸರ್ಕಾರಿ ಶಾಲೆಯ ಹೆಡ್​ಮಾಸ್ಟರ್ ಮಾಡಿರುವ ಈ ಅಸಭ್ಯ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸದ್ದು ಮಾಡುತ್ತಿದೆ.

ಘಟನೆಯನ್ನು ಮಹಿಳಾ ಶಿಕ್ಷಕಿ ವಿಡಿಯೋ ಮಾಡಿದ್ದಾಳೆ, ವಿಡಿಯೋದಲ್ಲಿ ಹೆಡ್​ ಮಾಸ್ಟರ್ ಮುತ್ತು ಕೇಳಿದಾಗ, ಇದಕ್ಕೆ ನನ್ನ ಒಪ್ಪಿಗೆಯಿಲ್ಲ, ಇದು ಅತ್ಯಂತ ಹೊಲಸು ಕೆಲಸ ಎಂದಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

1 hour ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

12 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

23 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

23 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago