ಹಾಜರಾತಿಗೆ ಮಾರ್ಕ್​ ಮಾಡಲು ಮುಖ್ಯೋಪಾಧ್ಯಯರ ಬಳಿ ಕೇಳಿದ ಶಿಕ್ಷಕಿ: ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಮುತ್ತು ನೀಡುವಂತೆ ಸಂಜ್ಞೆ‌  ಮಾಡಿದ ಹೆಡ್ ಮಾಸ್ಟರ್ : ಶಿಕ್ಷಕಿ ಮುಂದೆ ಹೆಡ್ ಮಾಸ್ಟರ್ ಅಸಭ್ಯ ವರ್ತನೆ: ನೆಟ್ಟಿಗರ ಆಕ್ರೋಶ

ಶಿಕ್ಷಕಿಯೊಬ್ಬರು ತಮ್ಮ ಹಾಜರಾತಿಗೆ ಮಾರ್ಕ್​ ಮಾಡಲು ಶಾಲೆಯ ಮುಖ್ಯೋಪಾಧ್ಯಯರ ಬಳಿ ಕೇಳಿದಾಗ ಆಗ ಆತ ಕೆನ್ನೆಗೆ ಮುತ್ತು ಕೊಟ್ಟರೆ ನೀಡುತ್ತೇನೆ ಎಂದು ಹೇಳಿದ್ದಾನೆ.

ಈ ಘಟನೆ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕೆನ್ನೆಗೆ ಮುತ್ತು ನೀಡುವಂತೆ ಕೇಳಿತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರಪ್ರದೇಶದಲ್ಲಿ ಸರ್ಕಾರಿ ಶಾಲೆಯ‌ ಶಿಕ್ಷಕರಿಗಾಗಿ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿತ್ತು. ಈ ವ್ಯವಸ್ಥೆ ಸಾಕಷ್ಟು ವಿರೋಧಗಳಿಗೆ ಕೂಡ ಎಡೆ ಮಾಡಿಕೊಟ್ಟಿತ್ತು. ಕೊನೆಗೆ ಯೋಗಿ ಅದಿತ್ಯನಾಥ್ ಸರ್ಕಾರ ಈ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಪ್ರಸ್ತುತ ತಡೆಹಿಡಿದಿದೆ. ಅದರ ಪರಿಣಾಮ ಶಿಕ್ಷಕಿಯರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ.

ಮುಖ್ಯೋಪಾಧ್ಯಯರ ಬಳಿ ಬಂದ ಮಹಿಳಾ ಶಿಕ್ಷಕಿ ತನ್ನ ಹಾಜರಾತಿ ಮಾರ್ಕ್ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಸಂಜ್ಞೆ ಮಾಡಿದ ಹೆಡ್​ ಮಾಸ್ಟರ್​ ಒಂದು ಮುತ್ತು ಕೊಡು ಮಾರ್ಕ್​ ಮಾಡ್ತೀನಿ ಎಂದಿದ್ದಾನೆ. ಸರ್ಕಾರಿ ಶಾಲೆಯ ಹೆಡ್​ಮಾಸ್ಟರ್ ಮಾಡಿರುವ ಈ ಅಸಭ್ಯ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸದ್ದು ಮಾಡುತ್ತಿದೆ.

ಘಟನೆಯನ್ನು ಮಹಿಳಾ ಶಿಕ್ಷಕಿ ವಿಡಿಯೋ ಮಾಡಿದ್ದಾಳೆ, ವಿಡಿಯೋದಲ್ಲಿ ಹೆಡ್​ ಮಾಸ್ಟರ್ ಮುತ್ತು ಕೇಳಿದಾಗ, ಇದಕ್ಕೆ ನನ್ನ ಒಪ್ಪಿಗೆಯಿಲ್ಲ, ಇದು ಅತ್ಯಂತ ಹೊಲಸು ಕೆಲಸ ಎಂದಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

59 minutes ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

2 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

2 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

4 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

8 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

8 hours ago