ಶಿಕ್ಷಕಿಯೊಬ್ಬರು ತಮ್ಮ ಹಾಜರಾತಿಗೆ ಮಾರ್ಕ್ ಮಾಡಲು ಶಾಲೆಯ ಮುಖ್ಯೋಪಾಧ್ಯಯರ ಬಳಿ ಕೇಳಿದಾಗ ಆಗ ಆತ ಕೆನ್ನೆಗೆ ಮುತ್ತು ಕೊಟ್ಟರೆ ನೀಡುತ್ತೇನೆ ಎಂದು ಹೇಳಿದ್ದಾನೆ.
ಈ ಘಟನೆ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕೆನ್ನೆಗೆ ಮುತ್ತು ನೀಡುವಂತೆ ಕೇಳಿತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉತ್ತರಪ್ರದೇಶದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಿಗಾಗಿ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯ ಮಾಡಲಾಗಿತ್ತು. ಈ ವ್ಯವಸ್ಥೆ ಸಾಕಷ್ಟು ವಿರೋಧಗಳಿಗೆ ಕೂಡ ಎಡೆ ಮಾಡಿಕೊಟ್ಟಿತ್ತು. ಕೊನೆಗೆ ಯೋಗಿ ಅದಿತ್ಯನಾಥ್ ಸರ್ಕಾರ ಈ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಪ್ರಸ್ತುತ ತಡೆಹಿಡಿದಿದೆ. ಅದರ ಪರಿಣಾಮ ಶಿಕ್ಷಕಿಯರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ.
ಮುಖ್ಯೋಪಾಧ್ಯಯರ ಬಳಿ ಬಂದ ಮಹಿಳಾ ಶಿಕ್ಷಕಿ ತನ್ನ ಹಾಜರಾತಿ ಮಾರ್ಕ್ ಮಾಡುವಂತೆ ಕೇಳಿಕೊಂಡಿದ್ದಾಳೆ. ಈ ವೇಳೆ ಕೆನ್ನೆಯ ಮೇಲೆ ಬೆರಳಿಟ್ಟು ಸಂಜ್ಞೆ ಮಾಡಿದ ಹೆಡ್ ಮಾಸ್ಟರ್ ಒಂದು ಮುತ್ತು ಕೊಡು ಮಾರ್ಕ್ ಮಾಡ್ತೀನಿ ಎಂದಿದ್ದಾನೆ. ಸರ್ಕಾರಿ ಶಾಲೆಯ ಹೆಡ್ಮಾಸ್ಟರ್ ಮಾಡಿರುವ ಈ ಅಸಭ್ಯ ವರ್ತನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸದ್ದು ಮಾಡುತ್ತಿದೆ.
ಘಟನೆಯನ್ನು ಮಹಿಳಾ ಶಿಕ್ಷಕಿ ವಿಡಿಯೋ ಮಾಡಿದ್ದಾಳೆ, ವಿಡಿಯೋದಲ್ಲಿ ಹೆಡ್ ಮಾಸ್ಟರ್ ಮುತ್ತು ಕೇಳಿದಾಗ, ಇದಕ್ಕೆ ನನ್ನ ಒಪ್ಪಿಗೆಯಿಲ್ಲ, ಇದು ಅತ್ಯಂತ ಹೊಲಸು ಕೆಲಸ ಎಂದಿದ್ದಾರೆ.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…