Categories: ಕೊಡಗು

ಹಾಡಹಗಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಸರ ಎಗರಿಸಿದ ಖದೀಮ: ಕಳ್ಳನನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಧರ್ಮದೇಟು

ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.

ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

3 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

5 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

7 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

16 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago