Categories: ಕೊಡಗು

ಹಾಡಹಗಲೇ ಮಹಿಳೆ ಮೇಲೆ ಹಲ್ಲೆ ನಡೆಸಿ ಸರ ಎಗರಿಸಿದ ಖದೀಮ: ಕಳ್ಳನನ್ನು ಗ್ರಾಮಸ್ಥರು ಪತ್ತೆ ಹಚ್ಚಿ ಧರ್ಮದೇಟು

ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.

ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

4 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago