ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.
ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.
ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…