ಮಡಿಕೇರಿ ತಾಲೂಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡ ಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿಯಾದ ಘಟನೆ ನಡೆದಿದೆ.
ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು, ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ. ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ.
ತಕ್ಷಣ ಏಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…