ಹಾಡೋನಹಳ್ಳಿಯಲ್ಲಿ ರಕ್ತದಾನ ಶಿಬಿರ ಆಯೋಜನೆ

ತೂಬಗೆರೆ ಹೋಬಳಿ ಮಹಿಳಾ ಕಾಂಗ್ರೆಸ್, ಸುಶ್ರುತ ಸ್ವಯಂ ರಕ್ತದಾನ ಕೇಂದ್ರ ಬೆಂಗಳೂರು ಇವರ ವತಿಯಿಂದ ತಾಲೂಕಿನ ಹಾಡೋನಹಳ್ಳಿಯಲ್ಲಿ ರಕ್ತದಾನ  ಶಿಬಿರ ಆಯೋಜನೆ ಮಾಡಲಾಗಿತ್ತು.

ರಕ್ತದಾನ ಶಿಬಿರವನ್ನು ಚಿರನುಡಿ ಕನ್ನಡಾಂಬೆ ಹೋರಾಟ ಸಮಿತಿ ಅಧ್ಯಕ್ಷ ರವಿ ಮಾವಿನಕುಂಟೆ ಅವರು ಉದ್ಘಾಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ… ರಕ್ತದಾನ ಶಿಬಿರಗಳು ಹೆಚ್ಚುಹೆಚ್ಚಾಗಿ ನಡೆಯಬೇಕು. ರಕ್ತದಾನ ಮಾಡಿದರೆ ರೋಗಿಯ ಜೀವ ಬದುಕುಳಿಯುತ್ತದೆ. ರೋಗಿಯ ಜೀವ ಉಳಿಯುವುದರ ಜೊತೆಗೆ ರಕ್ತದಾನ ಮಾಡಿದ ವ್ಯಕ್ತಿಯಲ್ಲಿ ಹಳೇ ರಕ್ತ ಹೋಗಿ ಹೊಸ ರಕ್ತ ಬಂದು ಆರೋಗ್ಯವಾಗಿರುತ್ತಾನೆ ಎಂದರು.

ಹೆಚ್ಚಾಗಿ ಯುವಕರು ರಕ್ತದಾನವನ್ನು ಮಾಡಬೇಕು. ಈ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಬೇಕು. ತಾನೂ ಆರೋಗ್ಯವಾಗಿರಲು, ಇತರರನ್ನು ಆರೋಗ್ಯವಂತರನ್ನಾಗಿಸಲು ಭಯಪಡದೇ, ಹಿಂಜರಿಯದೇ ರಕ್ತದಾನವನ್ನು ಮಾಡಿ ಎಂದು ಮನವಿ ಮಾಡಿದರು.

ರಕ್ತದಾನ ಶಿಬಿರದಲ್ಲಿ ಯುವಕರು ಸ್ವಯಂಪ್ರೇತರಾಗಿ ಉಚಿತವಾಗಿ ರಕ್ತದಾನ ಮಾಡಿದರು. ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದವರಿಗೆ ಹಣ್ಣುಹಂಪಲು, ಪ್ರಮಾಣಪತ್ರವನ್ನು ನೀಡಲಾಯಿತು.

ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸವಿತಾ ಆನಂದ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮೀನಾ ಕೃಷ್ಣಾ ಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶೋಭಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಿನ್ನೂರು ಕೆ. ವೆಂಕಟೇಶ್ , ಊರಿನ ಮುಖಂಡರಾದ ಶೆಟ್ಟಪ್ಪ, ಪ್ರಕಾಶ್, ಅನ್ನದಾಸೋಹಿ ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago