ಹಾಡೋನಹಳ್ಳಿಯಲ್ಲಿ ರಕ್ತದಾನ ಶಿಬಿರ ಆಯೋಜನೆ

ತೂಬಗೆರೆ ಹೋಬಳಿ ಮಹಿಳಾ ಕಾಂಗ್ರೆಸ್, ಸುಶ್ರುತ ಸ್ವಯಂ ರಕ್ತದಾನ ಕೇಂದ್ರ ಬೆಂಗಳೂರು ಇವರ ವತಿಯಿಂದ ತಾಲೂಕಿನ ಹಾಡೋನಹಳ್ಳಿಯಲ್ಲಿ ರಕ್ತದಾನ  ಶಿಬಿರ ಆಯೋಜನೆ ಮಾಡಲಾಗಿತ್ತು.

ರಕ್ತದಾನ ಶಿಬಿರವನ್ನು ಚಿರನುಡಿ ಕನ್ನಡಾಂಬೆ ಹೋರಾಟ ಸಮಿತಿ ಅಧ್ಯಕ್ಷ ರವಿ ಮಾವಿನಕುಂಟೆ ಅವರು ಉದ್ಘಾಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ… ರಕ್ತದಾನ ಶಿಬಿರಗಳು ಹೆಚ್ಚುಹೆಚ್ಚಾಗಿ ನಡೆಯಬೇಕು. ರಕ್ತದಾನ ಮಾಡಿದರೆ ರೋಗಿಯ ಜೀವ ಬದುಕುಳಿಯುತ್ತದೆ. ರೋಗಿಯ ಜೀವ ಉಳಿಯುವುದರ ಜೊತೆಗೆ ರಕ್ತದಾನ ಮಾಡಿದ ವ್ಯಕ್ತಿಯಲ್ಲಿ ಹಳೇ ರಕ್ತ ಹೋಗಿ ಹೊಸ ರಕ್ತ ಬಂದು ಆರೋಗ್ಯವಾಗಿರುತ್ತಾನೆ ಎಂದರು.

ಹೆಚ್ಚಾಗಿ ಯುವಕರು ರಕ್ತದಾನವನ್ನು ಮಾಡಬೇಕು. ಈ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಬೇಕು. ತಾನೂ ಆರೋಗ್ಯವಾಗಿರಲು, ಇತರರನ್ನು ಆರೋಗ್ಯವಂತರನ್ನಾಗಿಸಲು ಭಯಪಡದೇ, ಹಿಂಜರಿಯದೇ ರಕ್ತದಾನವನ್ನು ಮಾಡಿ ಎಂದು ಮನವಿ ಮಾಡಿದರು.

ರಕ್ತದಾನ ಶಿಬಿರದಲ್ಲಿ ಯುವಕರು ಸ್ವಯಂಪ್ರೇತರಾಗಿ ಉಚಿತವಾಗಿ ರಕ್ತದಾನ ಮಾಡಿದರು. ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದವರಿಗೆ ಹಣ್ಣುಹಂಪಲು, ಪ್ರಮಾಣಪತ್ರವನ್ನು ನೀಡಲಾಯಿತು.

ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸವಿತಾ ಆನಂದ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮೀನಾ ಕೃಷ್ಣಾ ಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶೋಭಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಿನ್ನೂರು ಕೆ. ವೆಂಕಟೇಶ್ , ಊರಿನ ಮುಖಂಡರಾದ ಶೆಟ್ಟಪ್ಪ, ಪ್ರಕಾಶ್, ಅನ್ನದಾಸೋಹಿ ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

23 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago