ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿ ಕುರಿ-ಮೇಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಸಾವಿರಾರು ರೂ. ಬೆಲೆ ಬಾಳುವ ಕುರಿ-ಮೇಕೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.
ಕಳೆದ ರಾತ್ರಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡ ಸಮೀಪದ ಮನೆಯೊಂದರ ಕೊಟ್ಟಿಗೆಯಲ್ಲಿ ಇರಿಸಿದ್ದ ಎರಡು ಮೇಕೆ ಹೋತಗಳು ಕಳ್ಳತನವಾಗಿದೆ..
ರೈತ ವೇಣುಗೋಪಾಲ್ ಎಂಬುವವರು ಕಳೆದ ಮೂರು ತಿಂಗಳಿಂದೆ ಸುಮಾರು 17.500 ರೂ. ಕೊಟ್ಟು ಎರಡು ಮೇಕೆ ಹೋತಗಳನ್ನು ತಂದಿದ್ದರು. ಅವುಗಳ ಈಗಿನ ಬೆಲೆ ಸುಮಾರು 40ಸಾವಿರ ರೂ. ಗೆ ಮಾರಾಟ ಆಗುತ್ತಿತ್ತು. ಇದೀಗ ಎರಡು ಮೇಕೆ ಹೋತಗಳು ಕಳ್ಳತನವಾಗಿವೆ. ಇದರಿಂದ ನಮಗೆ ತುಂಬಾ ನಷ್ಟ ಉಂಟಾಗಿದೆ. ಇತ್ತೀಚೆಗೆ ಹಾಡೋನಹಳ್ಳಿಯಲ್ಲಿ ಕುರಿ, ಮೇಕೆ ಕಳ್ಳತನ ಹೆಚ್ಚಾಗಿದೆ. ಪೊಲೀಸರು ಕಳ್ಳರ ಹೆಡೆಮುರಿ ಕಟ್ಟಿ ರೈತರ ನೆಮ್ಮದಿ ಬದುಕಿಗೆ ಅನುವು ಮಾಡಿಕೊಡಬೇಕು ಎಂದು ರೈತ ವೇಣುಗೋಪಾಲ್ ಹೇಳಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…